Breaking News

ಚುನಾವಣಾ ಪ್ರಚಾರದಲ್ಲಿ ತೊಡಗಿದ ಸರ್ಕಾರಿ ಅಧಿಕಾರಿಗಳು

Spread the love

ಬೆಳಗಾವಿ : ಸರ್ಕಾರಿ ಸೇವೆ ಮಾಡುತ್ತ ಜನರ ಸಂಕಷ್ಟಕ್ಕೆ ನಿಲ್ಲಬೇಕಾದ ಅಧಿಕಾರಿಗಳೇ ಚುನಾವಣಾ ಪ್ರಚಾರಕ್ಕೆ ತೊಡಗಿದ್ದು ದುರದೃಷ್ಟಕರ ಸಂಗತಿ. ಜಿಲ್ಲೆಯ ಕೆಲ ಅಧಿಕಾರಿಗಳು ಒಂದು ಪಕ್ಷದ ಮುಖಂಡರಂತೆ ವರ್ತನೆ ಮಾಡುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ಸರ್ವೇ ಸಾಮಾನ್ಯ ಆಗಿವೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಚುನಾವಣಾ ಆಯೋಗದ ಗಮನಕ್ಕೆ ಅಧಿಕಾರಿಗಳ ಕೆಟ್ಟ ವರ್ತನೆ ಗಮನಕ್ಕೆ ಬರದಿರುವುದು ವಿಪರ್ಯಾಸ.ಚುನಾವಣಾ ಪ್ರಚಾರದಲ್ಲಿ ತೊಡಗಿದ ಸರ್ಕಾರಿ ಅಧಿಕಾರಿಗಳು ; ಪ್ರಚಾರದ ವೀಡಿಯೋ ವೈರಲ್

ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಬಹಿರಂಗವಾಗಿ ಒಂದು ಸಮುದಾಯದ ಪರ ನಿಂತು ಕೆಲಸ ಮಾಡುತ್ತಿರುವ ನಡೆಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಕೆಲ ಅಧಿಕಾರಿಗಳು ಒಂದು ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ನಿಂತಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ