Breaking News

ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Spread the love

ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್, ಸೊಸೆ ಡಾ.ಹಿತಾ, ಸಚಿವರ ತಾಯಿ ಗಿರಿಜಾ ಹಟ್ಟಿಹೊಳಿ, ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರ ಪತ್ನಿ ಜೊತೆಗೂಡಿ ಮತದಾನ ಮಾಡಿದರು.

ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದರು‌.

ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ.

ಅರಭಾವಿ, ಗೋಕಾಕ್, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು) ಆಶೀರ್ವಾದವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ