Breaking News

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಂದ ಪತಿ:

Spread the love

ಬೆಂಗಳೂರು: ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯನ್ನೇ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ ರವಿಚಂದ್ರ ಬಂಧಿತ ಆರೋಪಿ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ರವಿಚಂದ್ರನನ್ನು ಬಂಧಿಸಿದ್ದಾರೆ.

ಪತ್ನಿ ವೀಣಾ(20) ಕೊಲೆ ಮಾಡಿ ಆರೋಪಿ ನಾಪತ್ತೆ ಕೇಸ್ ದಾಖಲಿಸಿದ್ದ. ಎರಡು ವರ್ಷದ ಹಿಂದೆ ಇವರ ಮದುವೆಯಾಗಿತ್ತು. ಮೇ 2 ರಂದು ನಾರಸಿಂಹನಹಳ್ಳಿ ಅರಣ್ಯದಲ್ಲಿ ವೀಣಾ ಶವ ಪತ್ತೆಯಾಗಿತ್ತು. ಪಕ್ಕದ ಮನೆ ಮಹಿಳೆ ಜೊತೆ ರವಿಚಂದ್ರ ಅನೈತಿಕ ಸಂಬಂಧ ಹೊಂದಿದ್ದ ವಿಚಾರ ತಿಳಿದ ಪತ್ನಿ ಗಲಾಟೆ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು. ಹೀಗಾಗಿ ಪತ್ನಿಯ ಕೊಂದು ರವಿಚಂದ್ರ ನಾಪತ್ತೆ ಡ್ರಾಮಾ ಮಾಡಿದ್ದ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿದ್ದಾರೆ. ಆರೋಪಿ ಬಂಧನ ಬೆನ್ನಲ್ಲೇ ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ವಿಚಾರಣೆಗೆ ಕರೆಯುತ್ತಾರೆ ಎಂದು ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ