Breaking News

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Spread the love

ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದಿಂದ ಮುಜುಗರಕ್ಕೆ ಸಿಲುಕಿರುವ ಬಿಜೆಪಿ ನಾಯಕರು ಲೋಕಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟಕ್ಕೆ ಮೊದಲೇ ಬಾಹ್ಯ ಮೈತ್ರಿಯನ್ನು ಕಡಿದುಕೊಳ್ಳುವರೇ ಎಂಬ ಚರ್ಚೆ ಆರಂಭವಾಗಿದ್ದು, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ವಿಪಕ್ಷ ನಾಯಕ ಆರ್‌.ಅಶೋಕ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗಳಿಂದ ಎರಡೂ ಪಕ್ಷಗಳ ಪಡಸಾಲೆಯಲ್ಲಿ ಈ ಚರ್ಚೆ ಪ್ರಾರಂಭಗೊಂಡಿದೆ. ಮುಜುಗರ ಎದುರಾದರೆ ಬಿಜೆಪಿ ನಾಯಕರು ಮೈತ್ರಿ ಮುರಿದುಕೊಳ್ಳಬಹುದು ಎಂದು ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲೇ ಹೇಳಿಕೆ ನೀಡಿದ್ದು, ಅಂತಿಮವಾಗಿ ವರಿಷ್ಠರ ನಿರ್ಧಾರಕ್ಕೆ ಬದ್ಧವಾಗಿರುವುದು ರಾಜ್ಯ ಬಿಜೆಪಿ ನಾಯಕರಿಗೆ ಅನಿವಾರ್ಯವಾಗಲಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ