Breaking News

ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಮಂಡ್ಯ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಆರ್.ವಾಸು ನೇಮಕ.

Spread the love

 

ಮಂಡ್ಯ :ಅಖಿಲ ಭಾರತ ಕ್ಷತ್ರಿಯ ಮಹಾಸಭಾದ ಕರ್ನಾಟಕ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಜನಪರ ಹೋರಾಟಗಾರ, ಸಂಘಟನಾ ಚತುರ.

ಮಂಡ್ಯ ಅಕ್ಕಿಹೆಬ್ಬಾಳು ಆರ್.ವಾಸು ಅವರನ್ನು ನೇಮಕ ಮಾಡಿ ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರ ಸಿಂಗ್ ಆದೇಶ ಹೊರಡಿಸಿದ್ದಾರೆ.

ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಅಧ್ಯಕ್ಷ ರಾಜರಾಜೇಂದ್ರಸಿಂಗ್ ಅವರು ನೀಡಿರುವ ನೇಮಕಾತಿ ಆದೇಶ ಪತ್ರವನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರಿಗೆ ನೀಡಿ ಮಾತನಾಡಿದ ವಾಸು ರಾಜ್ಯ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕ ಮಾಡಿಕೊಂಡು.

ಸಮಾಜದಲ್ಲಿ.ಅಸಂಘಟಿತರಾಗಿರುವ ಕ್ಷತ್ರಿಯ ಸಮಾಜದ ಬಂಧುಗಳನ್ನು ಸಂಘಟಿಸಿ, ತುಳಿತಕ್ಕೊಳಗಾದ ಸಮಾಜದ ಬಂಧುಗಳಿಗೆ ಅರಿವಿನ ಜಾಗೃತಿ ಮೂಡಿಸಿ ಸರ್ಕಾರದ ಸಂವಿಧಾನ ಬದ್ಧವಾದ ಸವಲತ್ತುಗಳನ್ನು ಕೊಡಿಸಲು ಹೋರಾಟ ನಡೆಸುವುದಾಗಿ ಆರ್. ವಾಸು ತಿಳಿಸಿದರು.

ಅಖಿಲ ಭಾರತೀಯ ಕ್ಷತ್ರಿಯ ಮಹಾಸಭಾದ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಐತಿಹಾಸಿಕ ತೀರ್ಪು

Spread the love ಬೆಳಗಾವಿ ನಗರವನ್ನು ಬೆಚ್ಚಿಬೀಳಿಸಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ