Breaking News

ಅಶುದ್ಧ ಕುಡಿಯುವ ನೀರು ಪೂರೈಕೆ

Spread the love

ವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಜನರಿಗೆ ಕುಡಿಯಲು ಯೋಗ್ಯವಲ್ಲದ ನೀರನ್ನು ಪೂರೈಸಲಾಗುತ್ತಿದ್ದು, ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಸ್ಥಳೀಯರು ತುತ್ತಾಗಿದ್ದಾರೆ.

ಗ್ರಾಮಸ್ಥರಿಗೆ ಪ್ರತಿ ದಿನ ನಲ್ಲಿ ಮೂಲಕ ಪೂರೈಸುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ.

‌ನವಲಗುಂದ | ಅಶುದ್ಧ ಕುಡಿಯುವ ನೀರು ಪೂರೈಕೆ

ಗ್ರಾಮಸ್ಥರು ಪಕ್ಕದ ನಾಗನೂರ ಅಥವಾ ನವಲಗುಂದ ಪಟ್ಟಣಕ್ಕೆ ಬಂದು ಕುಡಿಯುವ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ.

ಇಲ್ಲಿನ ಕೆರೆಯ ನೀರು ಶುದ್ಧವಾಗಿಲ್ಲ. ಇದೇ ನೀರನ್ನು ಗ್ರಾಮ ಪಂಚಾಯಿತಿಯಿಂದ ಗ್ರಾಮದ ಜನರಿಗೆ ನಿತ್ಯ ಸರಬರಾಜು ಮಾಡಲಾಗುತ್ತಿದೆ. ಗಲೀಜು ಆಗಿರುವ ನೀರನ್ನು ಶುದ್ಧೀಕರಣ ಮಾಡಿ ಬಿಡಬೇಕು ಎಂಬ ಅರಿವು ಸ್ಥಳೀಯ ಅಧಿಕಾರಿಗಳಲ್ಲಿ ಇಲ್ಲವಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ