Breaking News

ಟಯರ್‌ ಒಡೆದು ಕ್ರೂಸರ್‌ ಪಲ್ಟಿಮೂವರ ದುರ್ಮರಣ

Spread the love

ಸಂಬರಗಿ: ಹಿಂಬದಿಯ ಟಯರ್‌ ಒಡೆದ ಕಾರಣ ಕ್ರೂಸರ್‌ ಪಲ್ಟಿಯಾಗಿ ಮೂವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜತ್ತ-ಸಾಂಗೋಲಾ ರಾಜ್ಯ ಹೆದ್ದಾರಿಯ ಸೋನಂದ್‌ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಾಳಿಗೆರೆ ಗ್ರಾಮದ ಗೀತಾ ರವೀಂದ್ರ ದೊಡಮನಿ (36), ಮಹಾದೇವಿ ಶ್ರೀಶೈಲ ಚೌಗಲಾ (40) ಹಾಗೂ ಮಲಾಬಾದ ಗ್ರಾಮದ ಕಸ್ತೂರಿ ಶಂಕರ ಭಿರಡಿ (50) ಮೃತಪಟ್ಟವರು.

ಟಯರ್‌ ಒಡೆದು ಕ್ರೂಸರ್‌ ಪಲ್ಟಿ: ಅಥಣಿಯ ಮೂವರ ದುರ್ಮರಣ

ಬರಗಾಲ ಹಿನ್ನೆಲೆಯಲ್ಲಿ ಗಡಿಗ್ರಾಮದ ಜನರು ನಿತ್ಯ ದ್ರಾಕ್ಷಿ ತೋಟದಲ್ಲಿ ಕೆಲಸಕ್ಕೆಂದು ಮಹಾರಾಷ್ಟ್ರದ ಸಾಂಗೋಲಾ ತಾಲೂಕಿನ ಕಾಸೇಗಾವ ಗ್ರಾಮಕ್ಕೆ ತೆರಳುತ್ತಿದ್ದರು. ಗಾಯಾಳುಗಳನ್ನು ಸಾಂಗೋಲಾ ಸರಕಾರಿ ಆಸ್ಪತ್ರೆ ಹಾಗೂ ಮೀರಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ