Breaking News

ನಟ ಚಿರಂಜೀವಿ ಸರ್ಜಾ ಇನ್ನಿಲ್ಲ……………

Spread the love

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ ಅವರು ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಸಿದ್ದರು.

ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರ ತಮ್ಮ ಧ್ರುವ ಸರ್ಜಾ, ಪತ್ನಿ ಮೇಘನಾ ರಾಜ್ ಹಾಗೂ ಸುಂದರರಾಜ್, ಪ್ರಮೀಳಾ ಜೋಷಾಯ್ ಇದ್ದಾರೆ. ಕುಟುಂಬಸ್ಥರು ಹಾಗೂ ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ