Breaking News

ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ,ಬೆಳಗಾವಿ 38 ಜನರಿಗೆ ಸೋಂಕು

Spread the love

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 239 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 5,452ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಲಬುರಗಿ 39, ಯಾದಗಿರಿ 39, ಬೆಳಗಾವಿ 38, ಬೆಂಗಳೂರು ನಗರ 24, ದಕ್ಷಿಣ ಕನ್ನಡ 17, ದಾವಣಗೆರೆ 17, ಉಡುಪಿ 13, ಶಿವಮೊಗ್ಗ 12, ವಿಜಯಪುರ 9, ಬೀದರ್ 7, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 5, ಹಾಸನ 5, ಧಾರವಾಡ 3, ಗದಗ 2, ಉತ್ತರ ಕನ್ನಡ 2, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ಇನ್ನು ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಬೆಂಗಳೂರಿನಲ್ಲಿ 61 ವರ್ಷದ ಹಿರಿಯ ಮಹಿಳೆ ಹಾಗೂ 65 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಮಹಿಳೆ ಉಸಿರಾಟದ ಸಮಸ್ಯೆ ಹಾಗೂ ಹೈಪೋ ಥೈರಾಯ್ಡ್ ನಿಂದ ಬಳಲುತ್ತಿದ್ದರೆ, ವೃದ್ಧ ಮಧುಮೇಹ, ರಕ್ತದೊತ್ತಡ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ