Breaking News

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

Spread the love

ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ಬಾಮೀಜಿ ಹೇಳಿದರು.ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ

ಗುರುವಾರ ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಬೆದರಿಕೆ ಕುರಿತು ಅಂಜಲಿ ಅವರ ಸಹೋದರಿ ಪೊಲೀಸರ ಗಮನಕ್ಕೆ ತಂದಿದ್ದಳು.

ರಕ್ಷಣೆ ನೀಡುವಂತೆ ಕೋರಿದ್ದಳು. ಪೊಲೀಸರು ಆಗಲೇ ಎಚ್ಚೆತ್ತುಕೊಂಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದರು.

ಅಂಜಲಿ‌ ಕೊಲೆ ಅಮಾನವೀಯ ಘಟನೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಸುರಕ್ಷಿತವಾಗಿ ಬದುಕಲು ಅಸಾಧ್ಯವಾದ ವಾತಾವರಣ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರೇಮ ಪ್ರಕರಣದ ಕಾರಣಕ್ಕೆ ಈ ರೀತಿ ಯುವತಿಯರನ್ನು ಅಮಾನುಷವಾಗಿ ಕೊಲೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಎಚ್ಚರ ವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Spread the loveನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ