Breaking News

ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.

Spread the love

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್‍ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.

ಬಳ್ಳಾರಿಯ ಪೊಲೀಸ್ ಸಿಬ್ಬಂದಿಗೆ ಶನಿವಾರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಪ್ರವೀಣ್ ಸೂದ್ ಅವರಿಗೂ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಹೊಸಪೇಟೆಯ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಎರಡು ದಿನಗಳ ಹಿಂದೆ ಪ್ರವೀಣ್ ಸೂದ್ ಬಳ್ಳಾರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 40ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇವರ ಪೈಕಿ ಕೊರೊನಾ ಸೋಂಕಿತರಾದ ಟಿಬಿ ಡ್ಯಾಂನ ಸಿಪಿಐ ಕೂಡ ಇದ್ದರು. ಪ್ರವೀಣ್ ಸೂದ್ ಅವರು ಬಳ್ಳಾರಿ ಭೇಟಿಗೆ ಬಂದಾಗ ಟಿಬಿ ಡ್ಯಾಂ ಸಿಪಿಐ ಜೊತೆಯಲ್ಲಿಯೇ ಇದ್ದರು. ಹೀಗಾಗಿ ಪ್ರವೀಣ್ ಸೂದ್ ಅವರಿಗೂ ಇದೀಗ ಕೊರೊನಾ ಭೀತಿ ಎದುರಾಗಿದೆ.


Spread the love

About Laxminews 24x7

Check Also

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Spread the loveಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು  ಸಿಂಗಾಪುರ್‌ಗಿಂತಲೂ ಉತ್ತಮವಾದ ಅಂತಾರಾಷ್ಟ್ರೀಯ ಬಸ್ ನಿಲ್ದಾಣ ಮಾಡೋದಾಗಿ ಸಾರಿಗೆ ಸಚಿವ ರಾಮಲಿಂಗಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ