Breaking News

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಐಪಿಎಲ್ ಖುಷಿ ಕಿತ್ತುಕೊಂಡ ವರುಣ

Spread the love

ಬೆಂಗಳೂರು ಮೇ 18: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನ ವರುಣನ ಅರ್ಭಟ ಶುರುವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಗರದ ವಿಜಯನಗರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕೆಆರ್ ಮಾರುಕಟ್ಟೆ, ಗಾಂಧಿ ಬಜಾರ್ ಸೇರಿದಂತೆ ಹಲವೆಡೆ ಮಳೆ ತೀವ್ರಗೊಂಡಿದೆ.

Heavy Rain in Bengaluru: ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವಾರಾಂತ್ಯದ ಸಂತಸ ಹೆಚ್ಚಿಸಿ ಐಪಿಎಲ್ ಖುಷಿ ಕಿತ್ತುಕೊಂಡ ವರುಣ

ಏಕಾಏಕಿ ಮಳೆ ಜೋರಾಗಿ ಸುರಿಯುತ್ತಿದ್ದು ಸಂಜೆವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ ಕೂಡ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದು, ತಂಪಾದ ವಾತಾವರಣವಿತ್ತು.

ಏಕಾಏಕಿ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲಿ ನೀರು ನಿಂತುಕೊಂಡಿದೆ. ಇನ್ನೂ ವಾಹನ ಸವಾರರು ಮೆಟ್ರೋ ಪಿಲ್ಲರ್ ಹಾಗೂ ರಸ್ತೆ ಬದಿಯ ಅಂಗಡಿ ಮಳಿಗೆಗಳ ಆಶ್ರಯ ಪಡೆದಿರುವ ದೃಶ್ಯಗಳು ಕಂಡುಬರುತ್ತಿವೆ. ಮಳೆ ಹೀಗೆ ಮುಂದುವರೆದರೆ ಕಚೇರಿಗಳಿಗೆ ಹೋಗಿ ವಾಪಾಸ್ಸಾಗುವ ಜನರಿಗೆ ಕಿರಿಕಿರಿಯಾಗಲಿದೆ.


Spread the love

About Laxminews 24x7

Check Also

ಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ.

Spread the loveಅಕ್ರವಾಗಿ ಜೂಜಾಟ ನಡೆಸುತ್ತಿದ್ದ ಅಡ್ಡೆಯ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿ 12 ಆರೋಪಿಗಳನ್ನು ಬಂಧಿಸಿದ್ದಾರೆ. ನಂದಿಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ