Breaking News

3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

Spread the love

ಹುಬ್ಬಳ್ಳಿ: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್‌ ಸಾವಂತ್‌ ಅನ್ನು ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್‌ನನ್ನು ಬಂಧಿಸಲಾಗಿದೆ.

 

ಬಂಧಿತ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಪ್ರಾಥಮಿಕ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಕಳೆದ ಮೂರು ತಿಂಗಳಿನಿಂದ ಅಂಜಲಿಯನ್ನು ಕೊಲೆ ಮಾಡುವ ಯೋಜನೆ ಹಾಕಿಕೊಂಡಿದ್ದು , ಈ ವಿಷಯವನ್ನು ತನ್ನ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದಾಗಿ ಸಾವಂತ್ ಹೇಳಿದ್ದಾನೆ.ಹುಬ್ಬಳ್ಳಿ murder case: 3 ತಿಂಗಳಿಂದಲೇ ಅಂಜಲಿ ಹತ್ಯೆಗೆ ಪ್ಲಾನ್; ವಕೀಲರ ಬಳಿಯೂ ಮಾಹಿತಿ ಸಂಗ್ರಹ!

ನನ್ನನ್ನು ಶೀಘ್ರದಲ್ಲೇ ‘ಎರಡನೇ ಫಯಾಜ್’ ಎಂದು ಕರೆಯಲಾಗುವುದು, ಶೀಘ್ರದಲ್ಲೇ ಅಂಜಲಿಯನ್ನು ಕೊಲೆ ಮಾಡುವುದಾಗಿ ತನ್ನ ಕೆಲವು ಆಪ್ತರ ಬಳಿ ಸಾವಂತ್ ಹೇಳಿಕೊಂಡಿದ್ದನು ಎಂದು ತನಿಖಾ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ. ಫಯಾಜ್ ತನ್ನ ಮಾಜಿ ಸಹಪಾಠಿ ನೇಹಾ ಹಿರೇಮಠಳನ್ನು ಹುಬ್ಬಳ್ಳಿಯ ತನ್ನ ಕಾಲೇಜಿನಲ್ಲಿ ಏಪ್ರಿಲ್ 18 ರಂದು ಕೊಲೆ ಮಾಡಿದ್ದನು.


Spread the love

About Laxminews 24x7

Check Also

ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ –

Spread the love ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ – ಕೇಂದ್ರದ ವಿರುದ್ಧ ಡಿಸಿ ಕಛೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ