Breaking News

ನಿಗಮ-ಮಂಡಳಿ, ಸ್ಥಳೀಯ ಸಂಸ್ಥೆಗಳು ಸಭೆ ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ: ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರದ ವಿವಿಧ ನಿಗಮ-ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸಲು ಮಾದರಿ ನೀತಿ ಸಂಹಿತೆಯಿಂದ ವಿನಾಯ್ತಿ ನೀಡಿ ಆದೇಶಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಈ ಸಂಬಂಧ ಸಿಎಂ ಅಪರ ಮುಖ್ಯಕಾರ್ಯದರ್ಶಿ, ಡಿಸಿಎಂ ಆಪ್ತ ಕಾರ್ಯದರ್ಶಿ, ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ.

 

ಸಿಎಸ್ ಬರೆದಿರುವಂತ ಪತ್ರದಲ್ಲಿ ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಸರ್ಕಾರದ ವಿವಿಧ ನಿಗಮಗಳು, ಮಂಡಳಿಗಳು, ಸಮಿತಿಗಳು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ಇತರೆ ಶಾಸನಾತ್ಮಕ ಸಂಸ್ಥೆಗಳಲ್ಲಿ ಶಾಸನಾತ್ಮಕ ಸಭೆಗಳನ್ನು ನಡೆಸುವ ಬಗ್ಗೆ ಸಕ್ಷಮ ಪ್ರಾಧಿಕಾರಗಳು ಚುನಾವಣಾ ಆಯೋಗದ ನಿರ್ಣಯದಲ್ಲಿನ ಷರತ್ತುಗಳಿಗೆ ಒಳಪಟ್ಟು, ಸೂಕ್ತ ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿ

Spread the loveನವದೆಹಲಿ: ಉತ್ತರ ಪ್ರದೇಶ, ಪಂಜಾಬ್ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗೆ ತಿಂಗಳುಗಳು ಬಾಕಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ