Breaking News

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

Spread the love

ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು.

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು.

ಬೆಳಗಾವಿಯಿಂದ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ನೇತೃತ್ವದಲ್ಲಿ ತೆರಳಿದ ನಿಯೋಗಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಕ್ಷಣವೇ ನೀರು ಬಿಡುವ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ