Breaking News

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

Spread the love

ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು.

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು.

ಬೆಳಗಾವಿಯಿಂದ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ನೇತೃತ್ವದಲ್ಲಿ ತೆರಳಿದ ನಿಯೋಗಕ್ಕೆ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಕ್ಷಣವೇ ನೀರು ಬಿಡುವ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ