Breaking News

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ

Spread the love

ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ.

ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು.

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ Siddaramaiah ಸ್ಪಷ್ಟನೆ
ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ. ಕಾಂಗ್ರೆಸ್ ಸರ್ಕಾರ ಇರವಷ್ಟೂ ದಿನ ಗ್ಯಾರಂಟಿ ಯೋಜನೆ ಮುಂದುವರೆಯುತ್ತದೆ ಎಂದರು.

 

 

ಅಂತೆಯೇ ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ ಕಾಂಗ್ರೆಸ್ 15 ರಿಂದ 20 ಸ್ಥಾನಗಳನ್ನು ಪಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ