Breaking News

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

Spread the love

ಬೆಂಗಳೂರು : “ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.

ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದ ಅವರು, “ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಅವರು ಏನು ಬೇಕಾದರೂ ಮಾತನಾಡಿಕೊಳ್ಳಲಿ. ನಾನು ರಾಜೀನಾಮೆ ಕೊಡಬೇಕು ಎಂದು ಅವರು ಆಸೆ ಪಡುವುದನ್ನು ನಾನು ತಪ್ಪು ಎಂದು ಹೇಳಲು ಆಗುತ್ತದೆಯೇ?” ಎಂದರು.

ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದಾಗ “ಮೊದಲು ಶಿಕ್ಷಕ, ಪದವೀದರ ಕ್ಷೇತ್ರದ ಚುನಾವಣೆ ಮುಗಿಯಲಿ ನಂತರ ಇದರ ಬಗ್ಗೆ ಕೆಲಸ ಪ್ರಾರಂಭ ಮಾಡುತ್ತೇವೆ” ಎಂದರು.

ಇದೇ ವೇಳೆ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ್ ಗೌಡ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ಯುವಕ- ಯುವತಿಯರಿಗೆ ಶಿವಕುಮಾರ್ ಅವರು ಅಭಿನಂದಿಸಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ