Breaking News

ಚನ್ನಗಿರಿ ಲಾಕಪ್​ ಡೆತ್: ಪೊಲೀಸ್ ಠಾಣೆ ಧ್ವಂಸ ಪ್ರಕರಣದ ತನಿಖೆ ಸಿಐಡಿಗೆ!

Spread the love

ದಾವಣಗೆರೆ: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್​ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ.

ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು.ಚನ್ನಗಿರಿ ಪೊಲೀಸ್ ಠಾಣೆ

ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.ಈ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿ ಹೆಗಲಿಗೆ ನೀಡಲಾಗಿದ್ದು ಶೀಘ್ರವೇ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತಾಗಿ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ‌ಪ್ರಶಾಂತ್​ ಮಾತನಾಡಿದ್ದು, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ