Breaking News

ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

Spread the love

ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)​ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ.ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್​ರ ಆರೋಗ್ಯ ವಿಚಾರಿಸಿದ ಹೆಚ್​ಸಿ ಮಹದೇವಪ್ಪ

ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು.

ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ

ನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜೀವ್ ತಾರನಾಥ್ ಅವರ ಆರೋಗ್ಯದ ಕುರಿತು ವೈದ್ಯರು ಹಾಗೂ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದರು. ಮಹದೇವಪ್ಪಗೆ ಮೈಸೂರು ಜಿಲ್ಲಾ ಕಾಂಗ್ರೆಸ್ ಘಟಕದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಮತ್ತಿತರರು ಸಾಥ್​ ನೀಡಿದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ