Breaking News

ಸಿಲಿಂಡರ್ ಸ್ಫೊಟಗೊಂಡ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹೆಬ್ಬಾಳ್ಕರ್

Spread the love

ಬೆಳಗಾವಿ :‌ ಬೆಳಗಾವಿಯ ಸುಳಗಾ (ಯು) ಗ್ರಾಮದಲ್ಲಿ ಸಿಲಿಂಡರ್ ಸ್ಫೊಟಗೊಂಡು ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಗ್ರಾಮದ ಕಲ್ಲಪ್ಪ ಪಾಟೀಲ್ ಮತ್ತು ಸುಮನ್ ಪಾಟೀಲ್ ಸಿಲಿಂಡರ್ ಸ್ಫೋಟದಿಂದ ಸಾವಿಗೀಡಾಗಿದ್ದಾರೆ.

ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಾವು ; ಮೃತರ ಕುಟುಂಬಕ್ಕೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.ಈ ಸಮಯದಲ್ಲಿ ಯುವರಾಜ ಕದಂ, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಮನೋಜ ಕಲಕಾಂಬ್ಕರ್, ಗಣಪತ್ ಗಡ್ಕರಿ, ಗಂಗಾರಾಂ ನರೋಟಿ ಮುಂತಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

Spread the loveಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ