Breaking News

ಹೆಸರಷ್ಟೇ ‘ತುಂಬು’ಕೆರೆ, ವರ್ಷವಿಡೀ ಖಾಲಿ

Spread the love

ಎಂ.ಕೆ‌.ಹುಬ್ಬಳ್ಳಿ: ಒಂದು ಕಾಲದಲ್ಲಿ ಇಡೀ ಊರಿನ ಜನರ ದಾಹ ನೀಗಿಸುತ್ತಿದ್ದ ಇಲ್ಲಿನ ಐತಿಹಾಸಿಕ ‘ತುಂಬುಕೆರೆ’ ಈಗ ಬಾಯಾರಿ ಬಳಲಿದೆ. ಅಧಿಕಾರಿಗಳ ನಿರ್ಲಕ್ಷ್ಯ, ಜನರ ನಿಷ್ಕಾಳಜಿಯಿಂದ ಅವ್ಯವಸ್ಥೆ ಆಗರವಾಗಿ ಮಾರ್ಪಟ್ಟಿದೆ.ಎಂ.ಕೆ‌.ಹುಬ್ಬಳ್ಳಿ | ಹೆಸರಷ್ಟೇ 'ತುಂಬು'ಕೆರೆ, ವರ್ಷವಿಡೀ ಖಾಲಿ

ಇದು ಹೆಸರಿಗಷ್ಟೇ ತುಂಬುಕೆರೆ. ವರ್ಷವಿಡೀ ‘ಖಾಲಿ’ ಇರುತ್ತದೆ.

ಕಾಲುವೆ ಒತ್ತುವರಿಯಾಗಿದ್ದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿ-4 ನಿರ್ಮಾಣದ ವೇಳೆ ಕೆಲವು ಜಲಮೂಲ ಮುಚ್ಚಿದ್ದರಿಂದ ಕೆರೆಗೆ ಮಳೆನೀರು ಹರಿದುಬರುವುದು ನಿಂತಿದೆ.

ಕೆರೆಯ ಜಾಗ ಒತ್ತುವರಿ ಮತ್ತು ಕೊಳಚೆ ನೀರು ನುಗ್ಗುತ್ತಿರುವುದನ್ನು ತಡೆಯುವಲ್ಲಿ ವಿಫಲವಾದ ಪಟ್ಟಣ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ‘ಕೆರೆ ಉಳಿವಿಗೆ ಏಕೆ ನಿರ್ಲಕ್ಷ್ಯ ವಹಿಸುತ್ತಿದ್ದೀರಿ’ ಎಂದು ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ