Breaking News

ಭ್ರಷ್ಟಾಚಾರ ಆರೋಪ‌ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ..?

Spread the love

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ‌ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ತಮ್ಮ ಗೃಹ ಕಚೇರಿಗೆ ಸಚಿವ ನಾಗೇಂದ್ರ ಅವರ ಭೇಟಿಗೆ ಕರೆದುರುವುದು ಬೆಳಕಿಗೆ ಬಂದಿದೆ.

ಈ ಕುರಿತು ಸಚಿವ ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದು, ಇಂದು ಅಥವಾ ನಾಳೆ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಭ್ರಷ್ಟಾಚಾರ ಕುರಿತು ಈಗಾಗಲೇ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

 

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ..? ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

 

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಕುರಿತು ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಸಚಿವ ನಾಗೇಂದ್ರ ತಲೆದಂಡಕ್ಕೆ ಸಿಎಂ ಮನೆಗೆ ಮುತ್ತಿಗೆ ಹಾಕುವ ಯತ್ನವು ನಡೆಯಿತು. ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಕಡೆಗಳಲ್ಲಿ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ತಟ್ಟಿದೆ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ