Breaking News

ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು

Spread the love

ಕುಶಾಲನಗರ: ತಾಲೂಕಿನ ‌ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್‌ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಮಾದಾಪಟ್ಟಣ: ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು

ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಈ ಕುರಿತು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ