Breaking News

ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು. ನಿರಂಜನ ಹಿರೇಮಠ

Spread the love

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಆಗಿದ್ದು ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಸಿಐಡಿ ಡಿಜಿಪಿ ಅವರಿಗೆ ಮಾಹಿತಿ ಕೊಟ್ಟಿದ್ದೇನೆ ಎಂದು ನೇಹಾ ತಂದೆ ಹಾಗೂ ಹು-ಧಾ. ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಹೇಳಿದರು.

ಸಿಐಡಿ ಡಿಜಿಪಿ ಎಂ.ಎ. ಸಲೀಂ ಅವರು ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗಳ ಕೊಲೆಯಲ್ಲಿಯೇ ಇದು ಅಂತ್ಯ ಆಗಬೇಕು.Hubballi: ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು. ನಿರಂಜನ ಹಿರೇಮಠ ಹೇಳಿಕೆ

ನಮಗೆ ಆದ ಅನ್ಯಾಯ ಬೇರೆ‌ ಯಾರಿಗೂ ಆಗಬಾರದು ಎಂದರು.

ನನ್ನ ಮಗಳ ಕೊಲೆಯಾಗಿ ಒಂದೂವರೆ ತಿಂಗಳಾಯಿತು. ಸಿಐಡಿ ತಂಡ ಹುಬ್ಬಳ್ಳಿಯಲ್ಲಿಯೇ ಬಿಡು ಬಿಟ್ಟಿದ್ದು, ಎಲ್ಲಾ ಆಯಾಮಗಳ ಮೇಲೆ ತನಿಖೆ ನಡೆಸುತ್ತಿದ್ದಾರೆ ಎಂಬ ನಂಬಿಕೆ ಇದೆ.‌ ಆದಷ್ಟು ಬೇಗ ತನಿಖಾ ವರದಿ ಕೊಡಬೇಕು. ತನಿಖಾಧಿಕಾರಿಗಳು ಚಾರ್ಜ್‌ಶಿಟ್ ಸಲ್ಲಿಸಲಿ ನೋಡೋಣ. ಅದು ತನಿಖೆ ಯಾವ ರೀತಿ ನಡೆದಿದೆ ಎಂಬ ಬಗ್ಗೆ ಆಗ ಮಾತನಾಡುವೆ. ಆದರೆ ಈಗಲೇ ಏನು ಮಾತನಾಡಲು ಆಗಲ್ಲ ಎಂದರು‌.

ಅಂಜಲಿ ಅಂಬೀಗೇರ ಕೊಲೆ ಪ್ರಕರಣದ ತನಿಖೆ ಸಹ ನಡೆಯುತ್ತಿದೆ. ಅವಳ ಸಾವಿಗೂ ಸಹ ನ್ಯಾಯ ಸಿಗಬೇಕು ಎಂದರು.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ