Breaking News

ಕೌಟುಂಬಿಕ ಗಲಾಟೆಯಲ್ಲಿ ಓರ್ವನ ಕಿವಿ ಕತ್ತರಿಸಿದ ದುರುಳರು

Spread the love

ಚಿಕ್ಕೋಡಿ: ಕೌಟುಂಬಿಕ ಕಲಹದ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆಯಲ್ಲಿ ವ್ಯಕ್ತಿಯೋರ್ವನ ಕಿವಿ ಕತ್ತರಿಸಿದ ಘಟನೆ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು.

Chikkodi: ಕೌಟುಂಬಿಕ ಗಲಾಟೆಯಲ್ಲಿ ಓರ್ವನ ಕಿವಿ ಕತ್ತರಿಸಿದ ದುರುಳರು

ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ತುಂಡಾಗಿತ್ತು. ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು ಪೂಜಾರಿ ಸದಲಗಾ ಸರ್ಕಾರಿ ಕರೆದುಕೊಂಡು ಹೋಗಿದ್ದು, ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ