Breaking News

ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು  ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ: ರಮೇಶ ಜಾರಕಿಹೊಳಿ

Spread the love

ಬೆಂಗಳೂರು: ಕಾರ್ಯಕರ್ತರಿಗೆ ರಾಜ್ಯಸಭಾ ಟಿಕೇಟ್ ಕೊಟ್ಟಿದ್ದು  ಪ್ರಭಾಕರ ಕೋರೆ, ರಮೇಶ ಕತ್ತಿ ಅವರಿಗೂ ಖುಷಿಯಾಗಿದೆ ಬೇಸರಗೊಂಡಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 
ಬಿಜೆಪಿಯಿಂದ ರಾಜ್ಯಸಭಾ ಟಿಕೇಟ್ ಪ್ರಬಲ ಆಕಾಂಕ್ಷಿಗಳಾಗಿದ್ದ ರಮೇಶ್ ಕತ್ತಿ, ಉಮೇಶ್ ಕತ್ತಿ, ಪ್ರಭಾಕರ್ ಕೋರೆಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ  ಪ್ರತಿಕ್ರಿಯೆ ನೀಡಿದ ಅವರು, ಯಾರಿಗೂ ಅಸಮಾಧಾನ ಆಗಿಲ್ಲ, ಉಮೇಶ್ ಕತ್ತಿಗೆ ನಾಮಪತ್ರ ಬಳಿಕ ಭೇಟಿ ಮಾಡುತ್ತೇನೆ ಎಂದರು.
ಸದ್ಯ ರಮೇಶ್ ಕತ್ತಿ, ಪ್ರಭಾಕರ್ ಕೋರೆಯವರು ಬೇಸರಗೊಂಡಿಲ್ಲ. ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿದ್ದು ಅವರಿಗೂ ಖುಷಿಯಾಗಿದೆ. ನಾವು ಬೆಳಗಾವಿ ನಾಯಕರು ಮತ್ತೆ ಸಭೆ ಸೇರುತ್ತೇನೆ. ನಾವೆಲ್ಲಾ ಊಟಕ್ಕೆ ಆಗಾಗ ಸೇರೋದು ಮೊದಲಿಂದಲೂ ಪದ್ಧತಿ. ಅದರಲ್ಲಿ ಯಾವುದೇ ತಪ್ಪು ಹುಡುಕುವ ಅಗತ್ಯವಿಲ್ಲ ಎಂದು ರಮೇಶ್ ಜಾರಕಿಹೊಳಿ ಅವರು ಮಾತನಾಡಿದರು.

 


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ