Breaking News

ದೌರ್ಬಲ್ಯವೇ ಚಟಕ್ಕೆ ಕಾರಣ: ಬ್ರಹ್ಮಕುಮಾರಿ ಯೋಗಿನಿ

Spread the love

ಕೊಪ್ಪಳ: ‘ಮನುಷ್ಯನಲ್ಲಿ ಮಾನಸಿಕ ಹಾಗೂ ಅಧ್ಯಾತ್ಮಿಕ ಬಲ ಕಡಿಮೆಯಾಗಿರುವುದೇ ತಂಬಾಕಿಗೆ ಬಲಿಯಾಗಲು ಮುಖ್ಯ ಕಾರಣ’ ಎಂದು ಬ್ರಹ್ಮಕುಮಾರಿ ಯೋಗಿನಿ ಹೇಳಿದರು.

ಈಶ್ವರೀಯ ವಿಶ್ವವಿದ್ಯಾಲಯ ತನ್ನ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತಂಬಾಕು ನಿಷೇಧ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬುದ್ಧಿಜೀವಿಯಾದ ಮನುಷ್ಯನಿಗೆ ಒಳ್ಳೆಯದನ್ನು ಸ್ವೀಕಾರ ಮಾಡಲು ಆಗುತ್ತಿಲ್ಲ, ಕೆಟ್ಟದ್ದನ್ನು ಬಿಡಲೂ ಸಾಧ್ಯವಾಗುತ್ತಿಲ್ಲ.

ದೌರ್ಬಲ್ಯವೇ ಚಟಕ್ಕೆ ಕಾರಣ: ಬ್ರಹ್ಮಕುಮಾರಿ ಯೋಗಿನಿ

ಅನೇಕ ದುಶ್ಚಟಗಳಿಗೆ ದಾಸನಾಗುತ್ತಿದ್ದು, ದಿನೇ ದಿನೇ ಮನುಷ್ಯನಲ್ಲಿ ದುಃಖ ಹಾಗೂ ಅಶಾಂತಿ ಹೆಚ್ಚುತ್ತಿದೆ. ಇಂತಹ ಸ್ಥಿತಿಗೆ ಮೂಲ ಕಾರಣ ಮನುಷ್ಯನ ಮನೋಬಲ ಕಡಿಮೆಯಾಗಿರುವುದು’ ಎಂದರು.

‘ಮನುಷ್ಯ ತನ್ನ ಮೇಲೆ ತನಗೆ ನಿಯಂತ್ರಣ ಶಕ್ತಿ ಕಳೆದುಕೊಳ್ಳುತ್ತಿದ್ದಾನೆ. ಆದ್ದರಿಂದ ವರ್ತಮಾನ ಸಮಯದಲ್ಲಿ ಇಂದಿನ ಮನುಕುಲವನ್ನು ದುಶ್ಚಟಗಳಿಂದ ದೂರ ಮಾಡಲು ವ್ಯಕ್ತಿ ದುಶ್ಚಟಗಳಿಗೆ ವಶವಾಗದಂತೆ ಮಾಡಲು ವ್ಯಕ್ತಿಯಲ್ಲಿ ದೃಢತೆಯ ಶಕ್ತಿ ಆತ್ಮವಿಶ್ವಾಸವನ್ನು ಮೂಡಿಸುವ ಉದ್ದೇಶದಿಂದಲೇ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ