Breaking News

ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

Spread the love

ರಾಯಚೂರು: ರವಿವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಸಾಕಷ್ಟು ಅವ್ಯವಸ್ಥೆ ಉಂಟಾಗಿದ್ದು, ಮಾವಿನ ಕೆರೆ ಹತ್ತಿರದ ತರಕಾರಿ ಮಾರಾಟ ಕೇಂದ್ರ ಕೆಸರು ಗದ್ದೆಯಂತಾಗಿದೆ.

ಚರಂಡಿ ತುಂಬಿ ಕೊಚ್ಚೆ ನೀರು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ತರಕಾರಿ ಮಾರಾಟ ಪ್ರದೇಶವೆಲ್ಲ ಕೆಸರು ಗದ್ದೆಯಂತಾಗಿದೆ.Raichur: ಕೆಸರು ಗದ್ದೆಯಂತಾದ ತರಕಾರಿ ಮಾರಾಟ ಕೇಂದ್ರ

ತರಕಾರಿ ಮಾರಾಟಗಾರರಿಂದ ಶುಲ್ಕ ವಸೂಲಿ ಮಾಡುವ ನಗರಸಭೆ ಅವರಿಗೆ ಕನಿಷ್ಠ‌ ತರಕಾರಿ ಕಟ್ಟೆ ನಿರ್ಮಿಸದಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ತರಕಾರಿಯೆಲ್ಲ ಕೆಸರು ಮಯವಾಗಿರುವುದಕ್ಕೆ ಜನ ಖರೀದಿ ಮಾಡಲು ಹಿಂದೇಟು ಹಾಕುವಂತಾಗಿದೆ. ರೈತರಿಗೆ ಸೂಕ್ತ ನಷ್ಟ ಪರಿಹಾರ ಕಲ್ಪಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಅಂಬಾಜಿರಾವ್ ಒತ್ತಾಯಿಸಿದ್ದಾರೆ


Spread the love

About Laxminews 24x7

Check Also

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Spread the love ಬೆಂಗಳೂರು: ಭಾನುವಾರ ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ಬೆಂಗಳೂರಿನ ಮಣಿಪಾಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ