Breaking News

ನಾಳೆ ದೆಹಲಿಯಲ್ಲಿ INDIA ಬಣ ನಾಯಕರ ಸಭೆ-ಶರದ್ ಪವಾರ್

Spread the love

ಮುಂಬೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷಿತ ಸ್ಥಾನಗಳಲ್ಲಿ ಗೆಲುವು ಸಾಧಿಸುವಲ್ಲಿ ವಿಫಲವಾಗಿದ್ದು, ಸರ್ಕಾರ ರಚನೆಯಲ್ಲಿ ಜೆಡಿಯು ನಾಯಕ ನಿತೀಶ್ ಕುಮಾರ್ ಹಾಗೂ ಟಿಡಿಪಿ ಮುಖಂಡ ಚಂದ್ರಬಾಬು ನಾಯ್ಡು ಅವರ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಸೆಳೆಯಲು ಬಿಜೆಪಿ ಹಾಗೂ ವಿಪಕ್ಷಗಳ ಮೈತ್ರಿಕೂಟದ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ.

ನಾಳೆ ದೆಹಲಿಯಲ್ಲಿ INDIA ಬಣ ನಾಯಕರ ಸಭೆ-ಶರದ್ ಪವಾರ್

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್, ಮುಂದಿನ ಕಾರ್ಯತಂತ್ರ ಕುರಿತು ಚರ್ಚಿಸಲು ನಾಳೆ ದೆಹಲಿಯಲ್ಲಿ iNDIA ಬಣ ನಾಯಕರ ಸಭೆ ನಡೆಯಲಿದೆ ಎಂದು ತಿಳಿಸಿದರು. ಅಲ್ಲದೇ, ವಿಪಕ್ಷಗಳ ಕೂಟ ಸರ್ಕಾರ ರಚಿಸುವ ಸಾಧ್ಯತೆಯಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವಂತೆ ನಾನು ಜೆಡಿಯು ನಾಯಕ ನಿತೀಶ್ ಕುಮಾರ್ ಅಥವಾ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ಮಾತನಾಡಿಲ್ಲ ಎಂದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ