Breaking News

ಸೋತಲ್ಲಿ ಸಚಿವರ ತಲೆದಂಡ ಸಾಧ್ಯವೇ: ಜಗದೀಶ ಶೆಟ್ಟರ್‌ ಪ್ರಶ್ನೆ

Spread the love

ಬೆಳಗಾವಿ: ‘ಕಾಂಗ್ರೆಸ್‌ ಸೋತ ಕಡೆಯಲೆಲ್ಲ ಸಚಿವರ ತಲೆದಂಡ ಸಾಧ್ಯವೇ? ಹೀಗೆ ತಲೆದಂಡ ಮಾಡಿದರೆ, ರಾಜ್ಯ ಸರ್ಕಾರವೇ ತಲೆದಂಡ ತೆರಬೇಕಾಗುತ್ತದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

‘ಸಚಿವರ ಮಕ್ಕಳು, ಬಂಧುಗಳಿಗೆ ಟಿಕೆಟ್‌ ಕೊಟ್ಟು ತಂತ್ರ ಹೂಡಿದ ಕಾಂಗ್ರೆಸ್‌ ಈಗ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಗೊತ್ತಿಲ್ಲ.

ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲೇ ನನಗೆ 51 ಸಾವಿರ ಮತ ಮುನ್ನಡೆ ಸಿಕ್ಕಿದೆ. ಅವರ ಯಾವ ಗ್ಯಾರಂಟಿಗಳನ್ನೂ ಜನ ಒಪ್ಪಿಲ್ಲ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಅಬ್‌ ಕಿ ಬಾರ್‌ ಚಾರ್‌ ಸೌ ಪಾರ್‌’ ಎಂದು ಪ್ರಧಾನಿ ಮೋದಿ ಘೋಷಿಸಿ ವಿರೋಧ ಪಕ್ಷಗಳನ್ನು ಕಕ್ಕಾಬಿಕ್ಕಿ ಮಾಡಿದರು. ಇದೇ ಮಾತಿನ ಮೇಲೆ ವಿರೋಧಿಗಳು ಚರ್ಚೆ- ಗೊಂದಲದಲ್ಲಿ ಬೀಳಬೇಕು ಎಂಬ ಉದ್ದೇಶಕ್ಕೆ ಹೀಗೆ ಹೇಳಿದ್ದರು’ ಎಂದರು.

‘ಡಿ.ಕೆ.ಸುರೇಶ್‌ ಸೋಲಿನ ಕಾರಣ ಮುಖ್ಯಮಂತ್ರಿ- ಉಪಮುಖ್ಯಮಂತ್ರಿ ನಡುವೆ ಕಲಹ ಮತ್ತಷ್ಟು ಹೆಚ್ಚಲಿದೆ. ರಾಜ್ಯ ಸರ್ಕಾರ ಅತಿಸೂಕ್ಷ್ಮ ಸ್ಥಿತಿಯಲ್ಲಿದೆ’ ಎಂದರು.

ತಲಾ ₹1 ಲಕ್ಷ ವಸೂಲಿ:

‘ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಂದ ತಲಾ ₹1 ಲಕ್ಷ ವಸೂಲಿ ಮಾಡಲಾಗಿದೆ. ಆ ಹಣವನ್ನು ಸಚಿವೆ ತಮ್ಮ ಪುತ್ರನ ಚುನಾವಣಾ ಖರ್ಚಿಗೆ ಬಳಸಿದ್ದಾರೆ. ಸಚಿವೆಯ ದುರಾಹಂಕಾರ ಹಾಗೂ ಮಹಾನಾಯಕನ ಪಾಪಕರ್ಮದ ಫಲವಾಗಿ ಅವರಿಗೆ ಸೋಲಾಗಿದೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.

‘ಬಿಜೆಪಿ ಕಾರ್ಯಕರ್ತರೇ ಹಣ ಖರ್ಚು ಮಾಡಿ, ಊಟ ಕಟ್ಟಿಕೊಂಡು ಬಂದು ಶೆಟ್ಟರ್‌ ಅವರನ್ನು ಗೆಲ್ಲಿಸಿದ್ದಾರೆ’ ಎಂದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ