Breaking News

ಕಿಮ್ಸ್ ವೈದ್ಯರ ಜೊತೆ ಕೊರೊನಾ ಚಿಕಿತ್ಸೆ ಬಗ್ಗೆ ಬೊಮ್ಮಾಯಿ ಚರ್ಚೆ……….

Spread the love

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ನಿಯೋಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಭೇಟಿ ಮಾಡಿ, ಕೋವಿಡ್-19 ಕುರಿತು ಚರ್ಚಿಸಿದರು.

ಕಿಮ್ಸ್ ಆಸ್ಪತ್ರೆ ವೈದ್ಯರ ತಂಡ ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಕಿಮ್ಸ್‍ಗೆ ಅನುಮತಿ ನೀಡಿದೆ. ಹೀಗಾಗಿ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮನವಿಯನ್ನು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರ ನೇತೃತ್ವದ ತಂಡ ಗೃಹ ಸಚಿವರಿಗೆ ಸಲ್ಲಿಸಿದೆ. ಮನವಿಯನ್ನು ಸ್ವೀಕರಿಸಿ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಜೊತೆ ಚರ್ಚಿಸುವುದಾಗಿ ತಿಳಿಸಿ, ಇದೇ ವೇಳೆ ಮಹಾಮಾರಿ ಕೋವಿಡ್-19 ಸಂದರ್ಭದಲ್ಲಿ ಕಿಮ್ಸ್ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಶ್ಲಾಘಿಸಿದರು.

ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 848ಕ್ಕೆ ಏರಿದ್ದು, ಭಾನುವಾರ ಒಂದೇ ದಿನ 54 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಧಾರವಾಡದಲ್ಲಿ 12 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 7 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಸದ್ಯ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ