Breaking News

ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ

Spread the love

ಬೆಳಗಾವಿ: ‘ಸಂಶೋಧನೆಗಳು ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿರಬೇಕು’ ಎಂದು ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಶೋಧನಾ ವಿದ್ಯಾರ್ಥಿಗಳ ಜೊತೆ ಚರ್ಚೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

‘ಸರ್ಕಾರ ಮತ್ತು ವಿಶ್ವವಿದ್ಯಾಲಯದಿಂದ ಹಲವು ಸೌಕರ್ಯ, ಶಿಷ್ಯವೇತನ ನೀಡಲಾಗುತ್ತದೆ. ಜವಾಬ್ದಾರಿಯಿಂದ ಸಂಶೋಧನಾ ಅಧ್ಯಯನ ಮಾಡಬೇಕು. ವಿವಿಧ ವಿಶ್ವವಿದ್ಯಾಲಯಗಳ ಸಂಶೋಧನೆಗಳ ಕುರಿತು ಅಭ್ಯಸಿಸಬೇಕು’ ಎಂದರು.

ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ ಪೋತಪ್ರಗಾಧ, ‘ಸಂಶೋಧನಾ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಶ್ರದ್ಧೆ ಇರಬೇಕು. ಆಗ ಸಂಶೋಧನೆಗಳು ಪರಿಣಾಮಕಾರಿಯಾಗಿ ಪೂರ್ಣಗೊಳ್ಳುತ್ತವೆ. ಸಾಮಾಜಿಕ ಕಳಕಳಿಯುಳ್ಳ ಮತ್ತು ಪ್ರಚಲಿತ ವಿಷಯಗಳನ್ನು ಆಧರಿಸಿ ಸಂಶೋಧನೆ ಕೈಗೊಳ್ಳಬೇಕು’ ಎಂದರು.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ