Breaking News

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ: ಅಂಗಡಿ

Spread the love

ಬೆಳಗಾವಿ: ಚುನಾವಣೆ ಸಮಯದಲ್ಲಿ ಕೇವಲ ಅಪಪ್ರಚಾರ ಮಾಡಿ ಸುಳ್ಳು ಹೇಳುತ್ತಲೇ ಬಂದ ಕಾಂಗ್ರೆಸ್ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಂಸದೆ ಮಂಗಲಾ ಸುರೇಶ ಅಂಗಡಿ ತಿರುಗೇಟು ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಪುತ್ರನಿಗೆ ಮತದಾರರೇ ತಕ್ಕ ಪಾಠ ಕಲಿಸಿದ್ದಾರೆ: ಅಂಗಡಿ

ಕ್ಷೇತ್ರಕ್ಕೆ ಹಿಂದಿನ ಸಂಸದರಾಗಿದ್ದ ಸುರೇಶ ಅಂಗಡಿ ಏನು ಮಾಡಿಲ್ಲ. ಯಾವ ಯೋಜನೆಯನ್ನು ತಂದಿಲ್ಲ ಎಂದು ತಾಯಿ ಮತ್ತು ಮಗ ಸುಳ್ಳು ಅಪಪ್ರಚಾರ ಮಾಡಿದರು. ಈ ರೀತಿಯ ಅಪಪ್ರಚಾರಕ್ಕೆ ಮತದಾರರೇ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಗೆ ಹೆಚ್ಚು ಸ್ಥಾನಗಳು ಬರದೇ ಇರುವುದಕ್ಕೆ ಬೇಸರವಾಗಿದೆ. ಆದರೂ ಎನ್ ಡಿಎ ಸರಕಾರ ರಚನೆ ಮಾಡುತ್ತದೆ. ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಜಗದೀಶ್ ಶೆಟ್ಟರ್ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ ಎಂದು ವಿಶ್ವಾಸವಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ