Breaking News

ಶಾಸಕ ತಮ್ಮಣ್ಣವರ್ ವಿರುದ್ಧ ಗುಡುಗಿದ ಸತೀಶ್ ಜಾರಕಿಹೊಳಿ

Spread the love

ಎಸ್ಸಿ ನಾಯಕರನ್ನು ತುಳಿದಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣವರ್ ಆರೋಪಕ್ಕೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ,

ನಾನು ಯಾರನ್ನೂ ತುಳಿಯುವ ಪ್ರಶ್ನೆ ಇಲ್ಲ. ಚುನಾವಣೆಗೆ ಮೂರು ದಿನ ಇದ್ದಾಗಲೇ ಯಾರ ಕೈಗೂ ಶಾಸಕ ಸಿಕಿಲ್ಲ.

ಸರಿಯಾಗಿ ಚುನಾವಣೆ ಮಾಡಲಿಲ್ಲ, ನಾನೇ ಇದ್ದು ಅವರನ್ನ ನೋಡಿದ್ದೇನೆ. ಅವರಿಗೆ ಟಿಕೇಟ್ ನಾವೇ ಕೊಡಿಸಿದ್ದೇವೆ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ತಮ್ಮ ಮಾವನ ಪರವಾಗಿ ಕೆಲಸವನ್ನು ಮಾಡಿದ್ದಾರೆ ಎಂದರು.

 

ಶಾಸಕ ಪಕ್ಷ ವಿರೋಧಿ ಕೆಲಸ ಮಾಡಿದರೂ ಕಾರ್ಯಕರ್ತರು ಪಕ್ಷ ಬಿಡಲಿಲ್ಲ. ಅವರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ

, ಮುಗಿದ ಹೋಗಿರುವ ಅಧ್ಯಾಯ. ಅವರು ವಿರೋಧ ಮಾಡಿದರೂ ನಮಗೆ ಗೆಲುವಾಗಿದೆ. ಶಾಸಕನ ಕಾರ್ಯವನ್ನು ಕೊನೆ ಗಳಿಗೆಯಲ್ಲಿ ನಾನೆ ನೊಡಿದ್ದೇನೆ.

ಚುನಾವಣೆಗೆ ಎರಡು ದಿನ ಮುನ್ನ ತಮ್ಮಣ್ಣವರ್ ಎಲ್ಲಿ ಹೋದರು? ಎಷ್ಟು ಹಳ್ಳಿಗಳಲ್ಲಿ ಪ್ರಚಾರ ಮಾಡಿದ್ದಾರೆ ಹೇಳಲಿ ಎಂದು ಸತೀಶ್ ಜಾರಕಿಹೊಳಿ ಸವಾಲೆಸೆದರು.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ