Breaking News

ನೂತನ ಸಂಸದರಿಗೆ ರಾಹುಲ್‌ ಗಾಂಧಿ ಪಾಠ

Spread the love

ಬೆಂಗಳೂರು: ಸಂಸತ್ತು ಮತ್ತು ನಿಮ್ಮ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿರಬೇಕು. ಜನರ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ದನಿ ಎತ್ತಬೇಕು. ಯಾವುದೇ ಹೇಳಿಕೆಗಳು ಪಕ್ಷದ ಚೌಕಟ್ಟಿನಲ್ಲಿರಬೇಕೇ ಹೊರತು, ವೈಯಕ್ತಿಕವಾಗಿರಬಾರದು – ಇದು ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್‌ನ ನೂತನ ಸಂಸದರಿಗೆ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡಿದ ಪಾಠ ಇದು.

ನೂತನ ಸಂಸದರಿಗೆ ರಾಹುಲ್‌ ಗಾಂಧಿ ಪಾಠ

ಶುಕ್ರವಾರ ಖುದ್ದು ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾದ ಬಳಿಕ ರಾಹುಲ್‌ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ಸೋತ ಮತ್ತು ಗೆದ್ದ ಅಭ್ಯರ್ಥಿಗಳೊಂದಿಗೆ ಫ‌ಲಿತಾಂಶದ ಪರಾಮರ್ಶೆ ನಡೆಸಿದರು.

ಆಯ್ಕೆಯಾದವರಲ್ಲಿ ಕೆಲವರು ಹೊಸಬರಿದ್ದೀರಿ. ಸಂಸತ್ತಿನಲ್ಲಿ ಕ್ಷೇತ್ರದ್ದು ಸಹಿತ ಗಂಭೀರ ಸಮಸ್ಯೆಗಳ ಮೇಲೆ ಬೆಳಕುಚೆಲ್ಲಬೇಕು. ಪ್ರಮುಖ ಚರ್ಚೆ ಗಳಲ್ಲಿ ಭಾಗವಹಿಸಬೇಕು. ಭವಿಷ್ಯದ ದೃಷ್ಟಿಯಿಂದ ಜನರ ಮಧ್ಯೆ ಇದ್ದು ಕೆಲಸ ಮಾಡಬೇಕು. ಪಕ್ಷದ ಚೌಕಟ್ಟಿನಲ್ಲಿ ಹೇಳಿಕೆಗಳನ್ನು ನೀಡಬೇಕು. ನಿಮ್ಮ ವೈಯಕ್ತಿಕ ನೆಲೆಗಟ್ಟಿನಲ್ಲಿ ಹೇಳಿಕೆಗಳನ್ನು ನೀಡಬಾರದು. ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನ ಮನ್ನಣೆ ಪಡೆಯಬೇಕು ಎಂದರು.


Spread the love

About Laxminews 24x7

Check Also

ರಾಯಬಾಗ: ರೇಬಿಸ್ ಲಸಿಕಾ ಅಭಿಯಾನಕ್ಕೆ ಚಾಲನೆ

Spread the love ರಾಯಬಾಗ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಬೆಕ್ಕೇರಿ ಇವರ ಸಹಯೋಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ