Breaking News

ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

Spread the love

ಮಂಗಳೂರು, ಜೂನ್​ 08: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ (Girl) ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ (Mangaluru) ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ.

ಪಾಂಡೇಶ್ವರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯುವತಿ ಮಂಗಳೂರು ನಗರದ ನಾಗೂರಿಯಲ್ಲಿರುವ ಎಸ್​ಕೆ ಗ್ರೂಪ್ ಆಫ್ ಕಂಪನಿಯಲ್ಲಿ ಪ್ರೊಡಕ್ಟ್​ಗಳನ್ನು ಸೇಲ್ ಮಾಡುವ ಕೆಲಸ ಮಾಡುತ್ತಿದ್ದಾರೆ.ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

ಯುವತಿ ಶುಕ್ರವಾರ (ಜೂ.07) ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಾಗೂರಿಯಲ್ಲಿರುವ ಕಚೇರಿಗೆ ಹೋಗಿ ಪ್ರೊಡಕ್ಟ್​ಗಳನ್ನು ತೆಗೆದುಕೊಂಡಿದ್ದಾಳೆ. ಬಳಿಕ ಪ್ರೊಡಕ್ಟ್​ಗಳನ್ನು ಮಾರಾಟ ಮಾಡಲು ನಾಗೂರಿಯಿಂದ ಬಸ್​​ನಲ್ಲಿ ಹೊರಟು 9 ಗಂಟೆ ಸುಮಾರಿಗೆ ಸ್ಟೇಟ್ ಬ್ಯಾಂಕ್​ಗೆ ಬಂದು ಇಳಿದಿದ್ದಾರೆ.ನಂತರ ಸ್ಟೇಟ್ ಬ್ಯಾಂಕ್​ನಿಂದ ಬಜಪೆ ಕಡೆಗೆ ಹೋಗಲು ಮರೋಳಿ ಎಂಬ ಹೆಸರಿನ ಬಸ್ಸನಲ್ಲಿ 9:10ಕ್ಕೆ ಹತ್ತಿ ನಿರ್ವಾಹಕ ಸೈಡ್​ನ ನಾಲ್ಕನೇ ಸೀಟಿನಲ್ಲಿ ಕುಳಿತುಕೊಂಡಿದ್ದಾಳೆ. ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕೂತಿದ್ದ ಕುಳಿತುಕೊಂಡಿದ್ದ ಹಿಂಬದಿಯ ಸೀಟಿನಲ್ಲಿ ಕೂರುತ್ತಾನೆ. ಬಳಿಕ ಯುವತಿಯ ಸೊಂಟಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ