Breaking News

ಅಂಜಲಿ ಹತ್ಯೆ ಪ್ರಕರಣ ನೇಹಾ ತಂದೆ ಆಪ್ತ ಸಹಾಯಕನ ಕೈವಾಡ ಆರೋಪ

Spread the love

ಹುಬ್ಬಳ್ಳಿ, ಜೂ.08: ಮೇ.15 ರಂದು ಮನೆಗೆ ನುಗ್ಗಿ ಅಂಜಲಿ ಹತ್ಯೆ ಪ್ರಕರಣ (Anjali Ambigera Murder Case)ಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು,

 ಅಂಜಲಿ ಕೊಲೆಯಲ್ಲಿ ವಿಜಯ್ ಅಲಿಯಾಸ್ ಈರಣ್ಣನ‌ ಪಾತ್ರ ಇದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನೇಹಾ ತಂದೆ ನಿರಂಜನ ಹಿರೇಮಠ ಅವರ ಆಪ್ತ ಸಹಾಯಕನಾಗಿರುವ ವಿಜಯ್ ಮೇಲೆ ಅಂಜಲಿ ಸಹೋದರಿಯ ಪತಿಯಾದ ಶಿವಕುಮಾರ್ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯ ಬಸವನಗರದಲ್ಲಿ ಹಲ್ಲೆಗೆ ಯತ್ನಿಸಿದ್ದ.

ಈ ಕುರಿತು ವಿಜಯ್ ಶಿವಕುಮಾರ್ ವಿರುದ್ದ ಬೆಂಡಿಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ.

ವಿಜಯ್​ ಬಂಧಿಸಲು ಅಂಜಲಿ ಸಹೋದರಿ ಯಶೋಧಾ ಆಗ್ರಹ

ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ

ಇನ್ನು ವಿಜಯ್​ನನ್ನು ಕೂಡ ಅರೆಸ್ಟ್ ಮಾಡಬೇಕೆಂದು ಅಂಜಲಿ ಸಹೋದರಿ ಯಶೋಧಾ ಆಗ್ರಹಿಸಿದ್ದರು.

ಇದೀಗ ವಿಜಯ್ ಅಂಗಡಿಗೆ ಹೋದಾಗ ಬೈಕ್ ಅಡ್ಡಗಟ್ಟಿದ ಶಿವಕುಮಾರ್ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ ಎಂದು ವಿಜಯ್​ ಬೆಂಡಿಗೇರಿ ಠಾಣೆಯಲ್ಲಿ ದೂರು ನೀಡಿದ್ದ. ಈ ಹಿನ್ನಲೆ ಸೆಕ್ಷನ್ 341,504 ಹಾಗೂ 506 ಅಡಿಯಲ್ಲಿ ಪ್ರಕರಣ ದಾಖಲಿಸಿ, ಹಲ್ಲೆಗೆ ಮುಂದಾಗಿದ್ದ ಶಿವಕುಮಾರ್​ನನ್ನ ಪೊಲೀಸರು ಬಂಧಿಸಿದ್ದಾರೆ.

ಇದರ ಜೊತೆಗೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಶಿವಕುಮಾರ್ ವಿರುದ್ದ ಕಳ್ಳತನ ಪ್ರಕರಣವು ದಾಖಲಾಗಿದ್ದು, ಶಿವಕುಮಾರ್ ವಿರುದ್ದ ಪೊಲೀಸರು ವಾರೆಂಟ್ ಕೂಡ ಹೊರಡಿಸಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ