Breaking News

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು- ಸಂಕಷ್ಟಕ್ಕೆ ಸಿಲುಕಿದ ಅಂಗಡಿ ಮಾಲೀಕರು!

Spread the love

ಯೋಧ್ಯೆ: ರಾಮನ ನಾಡು ಅಯೋಧ್ಯೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಗೆಲುವು ಸಾಧಿಸಿದ್ದು, ಬಿಜೆಪಿಗೆ ತೀವ್ರ ಮುಖಭಂಗವನ್ನು ಅನುಭವಿಸಿದೆ. ಆದರೆ, ಬಿಜೆಪಿಯ ಸೋಲು ಅಯೋಧ್ಯೆಯ ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ.

Ayodhya: ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು- ಸಂಕಷ್ಟಕ್ಕೆ ಸಿಲುಕಿದ ಅಂಗಡಿ ಮಾಲೀಕರು!

ಅಂಗಡಿಯ ಮಾಲೀಕ ಅಹತ್ ಸಾಹು ಮಾತನಾಡಿದ್ದು, ಬಿಜೆಪಿ ಆಡಳಿತವು ಅಯೋಧ್ಯೆ ಮಂದಿರದ ಅಭಿವೃದ್ಧಿಗಾಗಿ ನಮ್ಮ ಅಂಗಡಿಗಳನ್ನು ಸ್ವಾದೀನ ಪಡಿಸಿಕೊಂಡಿತ್ತು. ಆಗ ನಮಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡಿತ್ತು. ಆದರೆ, ಮುಂದಿನ ದಿನಗಳಲ್ಲಿ ಹೊಸ ಅಂಗಡಿಗಳನ್ನು ನಿರ್ಮಿಸಿ ಕೊಡುವುದಾಗಿ ಭರವಸೆಯನ್ನು ನೀಡಿತ್ತು. ಅದಕ್ಕಾಗಿ ನಾವು 15-20 ಲಕ್ಷ ರೂಪಾಯಿ ಪರಿಹಾರವನ್ನು ಕೇಳಿದ್ದೇವು ಎಂದು ಹೇಳಿದ್ದಾರೆ.

ಹಾಗೆಯೇ, ಇಲ್ಲಿನ ಜನರು ಕೂಡ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಇಲ್ಲಿನ ಜನರಿಗೆ ಯಾವುದೇ ಸಹಾಯ ಮಾಡಿಲ್ಲ. ನಾವು ರಾಮನನ್ನು ಆರಾಧಿಸುತ್ತೇವೆ. ಆದರೆ, ನಮ್ಮ ಜೀವನೋಪಾಯವನ್ನು ಕಸಿದುಕೊಂಡರೆ ನಾವು ಹೇಗೆ ಬದುಕುತ್ತೇವೆ? ರಾಮಪಥ ನಿರ್ಮಾಣದ ವೇಳೆ ಸ್ಥಳೀಯರಿಗೆ ಮಳಿಗೆಗಳನ್ನು ಮಂಜೂರು ಮಾಡುವುದಾಗಿ ಬಿಜೆಪಿ ಹೇಳಿತ್ತು. ಆ ಕಾರ್ಯ ಇನ್ನೂ ನಡೆದಿಲ್ಲ ಎಂದು ವ್ಯಾಪಾರಿಯೊಬ್ಬರು ಹೇಳಿದ್ದಾರೆ.


Spread the love

About Laxminews 24x7

Check Also

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Spread the loveಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ