Breaking News

ಬಗೆಹರಿಯದ ನೀರಿನ ಸಮಸ್ಯೆ: ಸರ್ಕಾರದ ಮಾತಿಗೆ ಇಲ್ಲಿ ಕವಡೆ ಕಾಸಿನ ಬೆಲೆ ಇಲ್ಲ

Spread the love

ರಾಯಚೂರು: ರಾಜ್ಯದಲ್ಲಿ ಯಾವ ಸರ್ಕಾರ ಬಂದರೇನು?, ಹೋದರೇನು? ಸರ್ಕಾರದ ಮಾತಿಗೆ ಜಿಲ್ಲೆಯಲ್ಲಿ ಕವಡೆ ಕಾಸಿನ ಬೆಲೆ ಇಲ್ಲ. ಜಿಲ್ಲೆಯ ಹಲವೆಡೆ ನೀರಿಗಾಗಿ ಪರಿತಪಿಸುತ್ತ ವರ್ಷ ಕಳೆದರೂ ಜಿಲ್ಲಾಡಳಿತ ಗಂಭೀರವಾಗಿಲ್ಲ. ಚುನಾಯಿತ ಪ್ರತಿನಿಧಿಗಳೂ ತಲೆಕೆಡಿಸಿಕೊಂಡಿಲ್ಲ. ಅಧಿಕಾರಿಗಳು ಯಾರ ಮಾತನ್ನೂ ಕೇಳುತ್ತಿಲ್ಲ.

ಹೀಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಜನರ ಗೋಳು ಹೆಚ್ಚಿದೆ.ಬಗೆಹರಿಯದ ನೀರಿನ ಸಮಸ್ಯೆ: ಸರ್ಕಾರದ ಮಾತಿಗೆ ಇಲ್ಲಿ ಕವಡೆ ಕಾಸಿನ ಬೆಲೆ ಇಲ್ಲ

ಜಿಲ್ಲಾ ಉಸ್ತುವಾರಿ ಸಚಿವರು ಇದ್ದರೂ ಯಾವ ಲೆಕ್ಕಕ್ಕೂ ಇಲ್ಲ. ಅವರು ಜಿಲ್ಲೆಯ ಜನರ ಸಮಸ್ಯೆಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿಲ್ಲ. ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೂಲಕವಾದರೂ ಸಮಸ್ಯೆ ಅರಿತುಕೊಳ್ಳಲು ಪ್ರಯತ್ನಿಸಬಹುದು ಎನ್ನುವ ಭರವಸೆಯೂ ಇದೀಗ ಹುಸಿಯಾಗಿದೆ.

ಮಹಿಳೆಯರು ಮಕ್ಕಳು ಜಿಲ್ಲಾಧಿಕಾರಿ ನಿವಾಸ, ಜಿಲ್ಲಾಡಳಿತ ಕಚೇರಿ, ತಾಲ್ಲೂಕು ಆಡಳಿತ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿಗಳ ಮುಂದೆ ನೀರಿಗಾಗಿ ಕೊಡ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ. ನೀರು ಕೊಡಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆಸಿದವರ ವಿರುದ್ಧವೇ ಪ್ರಕರಣ ದಾಖಲಿಸಿ, ನೋಟಿಸ್‌ ಕೊಟ್ಟು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ಆಡಳಿತದ ವಿರುದ್ಧ ಜನರ ಆಕ್ರೋಶ ಹೆಚ್ಚುತ್ತಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ