Breaking News

ಬೆಂಗಳೂರು : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ

Spread the love

ಬೆಂಗಳೂರು : ಹಾಸ್ಟೆಲ್ ರೂಮ್ನಲ್ಲಿ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಈ ದುರಂತ ನಡೆದಿದೆ.

ಹೌದು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯನ್ನು ಎಂಬಿಬಿಎಸ್ ವಿದ್ಯಾರ್ಥಿ ಲೋಕೇಂದ್ರನಾಥ ಕುಮಾರ್ ಸಿಂಗ್ ಎಂದು ತಿಳಿದುಬಂದಿದೆ.BREAKING : ಬೆಂಗಳೂರು : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು 'MBBS' ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು!

ಈತ ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ಹೇಳಲಾಗುತ್ತಿದ್ದು, ಮೆಡಿಕಲ್ ಕಾಲೇಜು ಹಾಸ್ಟೆಲ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಲೋಕೇಂದ್ರನಾಥ್ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಬೆಳಗ್ಗೆ ಪ್ರಯೋಗಾತ್ಮಕ ಪರೀಕ್ಷೆಗೆ ಲೋಕೇಂದ್ರನಾಥ ಹಾಜರಾಗಿದ್ದ ಎನ್ನಲಾಗಿದೆ. ಆದರೆ ಮಧ್ಯಾಹ್ನ ಹಾಸ್ಟೆಲ್ ರೂಮಿಗೆ ಬಂದು ಡೋರ್ ಲಾಕ್ ಮಾಡಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲೋಕೇಂದ್ರನಾಥ್ ಮೂಲತಃ ರಾಜಸ್ಥಾನದವನೆಂದು ಹೇಳಲಾಗುತ್ತಿದ್ದು, ಇದೀಗ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣದ ಮಾಸ್ಟರ್​​ ಮೈಂಡ್ ದಕ್ಷಿಣಕನ್ನಡ ಮಾಜಿ ಡಿಸಿ ಸಸಿಕಾಂತ್ ಸೆಂಥಿಲ್ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪ

Spread the love ಬೆಂಗಳೂರು/ದಕ್ಷಿಣ ಕನ್ನಡ: “ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತರದ ಹಿಂದಿನ ಮಾಸ್ಟರ್​ ಮೈಂಡ್​​ ತಮಿಳುನಾಡಿನ ತಿರುವಲ್ಲೂರಿನ ಕಾಂಗ್ರೆಸ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ