Breaking News

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ಡಿ.ಕೆ.ಶಿ

Spread the love

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸ್ಜಿವಕುಮಾರ್, ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು.

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ತಪ್ಪಿನ ಬಗ್ಗೆ ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ ಮಾಡಲಾಗುವುದು. ಇಂದು ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದರು.

`


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ