Breaking News

ಮತ್ತೆ ಮೂವರು ಡಿಸಿಎಂ ಬೇಡಿಕೆ ಮುಂದಿಟ್ಟ ಸಚಿವ ಕೆ.ಎನ್‌.ರಾಜಣ್ಣ

Spread the love

ತುಮಕೂರು (ಗ್ರಾಮಾಂತರ): ಮೂವರು ಉಪಮುಖ್ಯಮಂತ್ರಿ ಆಗಬೇಕು ಎಂಬ ನನ್ನ ನಿರಂತರ ವಾದ ಇದ್ದೇ ಇದೆ. ಈಗ ಸ್ಥಳೀಯ ಸಂಸ್ಥೆ ಚುನಾವಣೆ ಇದೆ. ಹೀಗಾಗಿ 3 ಡಿಸಿಎಂ ಬೇಕು. ಲೋಕಸಭಾ ಚುನಾವಣೆ ಇದ್ದಿದ್ದರಿಂದ ಮಲ್ಲಿಕಾರ್ಜುನ ಖರ್ಗೆ ಅವರು ಸುಮ್ಮನಿರಲು ಹೇಳಿದ್ದರು. ಹೀಗಾಗಿ ಇಷ್ಟು ದಿನ ಸುಮ್ಮನಿದ್ದೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಹೇಳಿದರು.

ಮತ್ತೆ ಮೂವರು ಡಿಸಿಎಂ ಬೇಡಿಕೆ ಮುಂದಿಟ್ಟ ಸಚಿವ ಕೆ.ಎನ್‌.ರಾಜಣ್ಣ

ಸುದ್ದಿಗಾರರ ಜತೆ ಮಾತನಾಡಿ, ಈ ಬಗ್ಗೆ ಸದ್ಯದಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮತ್ತೆ ಖುದ್ದಾಗಿ ಭೇಟಿ ಮಾಡಿ ಈ ವಿಚಾರ ಕುರಿತು ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ, ಸಿಎಂ ಆಗುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ರಾಜಣ್ಣ, ಖರ್ಗೆ ಅವರು ಸಿಎಂ ಆಗಬೇಕೆಂದು ಆಪೇಕ್ಷೆ ಪಡೋದನ್ನು ಯಾರೂ ಅಡ್ಡಿಪಡಿಸೋಕೆ ಆಗಲ್ಲ. ಯಾರೂ ತಪ್ಪಿಸೋಕೂ ಆಗಲ್ಲ. ಸಿಎಂ ಆಗೋ ಸಾಧ್ಯತೆ ಇದ್ದರೆ, ಖರ್ಗೆ ಆಗಲೇ ಆಗುತ್ತಿದ್ದರು. ಈಗ ಆ ಲಕ್ಷಣ ಇಲ್ಲ ಎಂದರು.

ಹಾಸನ ಜಿಲ್ಲೆ ಉಸ್ತುವಾರಿ ಬದಲಾವಣೆ ಮಾಡ್ತಾರಾ? ಮಾಡಿದ್ರೆ ಮಾಡಲಿ. ನಾನು ಯಾವಾಗಲೂ ಕೇಳಿರಲಿಲ್ಲ. ವಾಪಸ್‌ ತಗೊಂಡ್ರೆ ವಾಪಸ್‌ ತಗೊಳ್ಳಲಿ. ನಾನು ರಾಜಕೀಯದ ಅಧಿಕಾರಕ್ಕಾಗಿ ಆಸೆ ಪಡೋನಲ್ಲ ಎಂದು ರಾಜಣ್ಣ ಹೇಳಿದರು.


Spread the love

About Laxminews 24x7

Check Also

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

Spread the loveಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ