Breaking News

ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಸಚಿವ ಕೆ.ಎನ್‌.ರಾಜಣ್ಣ

Spread the love

ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ ಆಗಲ್ಲ’ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ನುಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಬದಲಾಗುತ್ತಾರೆ?

ಒಂದು ವರ್ಷ ಕೆಲಸ ಮಾಡೋದ್ರಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿದ್ದಾರಾ? ಅಥವಾ ಯಾವುದಾದರೂ ಹಗರಣ ಇದೆಯಾ? ಇಲ್ಲ ಅಂದ ಮೇಲೆ ಯಾವ ಆಧಾರದ ಮೇಲೆ ಅವರನ್ನು ಬದಲಾಯಿಸಲು ಹೋಗುತ್ತಾರೆ ಎಂದರು.

ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಬದಲಾವಣೆ ಆಗಲ್ಲ. ಹಾಗೇ ಯಾವ ಸಚಿವರ ಖಾತೆಗಳೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ