Breaking News

ಬೈಕ್‌ ಡಿಕ್ಕಿ: ಸವಾರ ಸಾವು

Spread the love

ಹಂದಿಗುಂದ: ಸಮೀಪದ ಪಾಲಬಾವಿಯಲ್ಲಿ ಸೋಮವಾರ ರಾತ್ರಿ ಬೈಕುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟಿದ್ದಾನೆ.

ಸುಲ್ತಾನಪುರ ಗ್ರಾಮದ ರಾಘವೇಂದ್ರ ರಾಮಪ್ಪ ಹಾದಿಮನಿ (28) ಮೃತ ವ್ಯಕ್ತಿ. ಹಾರೂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಪಾಲಬಾವಿ ಗ್ರಾಮದಲ್ಲಿ ಸೋಮವಾರ ರಾತ್ರಿ 8 ಗಂಟೆಗೆ ಅಪಘಾತ ನಡೆದಿದೆ.

ಬೈಕ್‌ ಡಿಕ್ಕಿ: ಸವಾರ ಸಾವು

ಹಿಂಬದಿಯ ಸವಾರ ಸೌರಭ ತುಕಾರಾಮ ಮಾದರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾರೂಗೇರಿ ಸಿಪಿಐ ರವಿಚಂದ್ರನ ಬಡಪಕೀರಪ್ಪನವರ, ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಸಿಬ್ಬಂದಿಯವರು ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ