Breaking News

ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

Spread the love

ಕುಣಿಗಲ್ : ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕುಣಿಗಲ್ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲೂಕಿನ ಕೊತ್ತಗೆರೆ ಹೋಬಳಿ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ (27) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ತಗೆರೆ ಪಾಳ್ಯದ ಸೀನಾ ಅಲಿಯಾಸ್ ಶ್ರೀನಿವಾಸ್ (34), ಉಮೇಶ (32), ಚನ್ನಪ್ಪಗೌಡನಪಾಳ್ಯ ಗುರುರಾಜ್ (40), ಬಿದನಗೆರೆ ಗ್ರಾಮದ ಶಿವರಾಮ್ (38), ಸೊಬಗಾನಹಳ್ಳಿ ಗ್ರಾಮದ ಲಕ್ಷ್ಮಣ (36) ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.

Kunigal; ಕಾರಿನಿಂದ ಬೈಕ್‌ಗೆ ಗುದ್ದಿ ಯುವಕನ ಕೊಲೆ: ಐವರ ಬಂಧನ

ಜೂ 10 ಸೋಮವಾರ ಬಾಗೇನಹಳ್ಳಿ ಗ್ರಾಮದ ರಾಮಚಂದ್ರ ಕೆಲಸದ ನಿಮಿತ ಕುಣಿಗಲ್ ಪಟ್ಟಣಕ್ಕೆ ಬಂದು ತನ್ನ ಗ್ರಾಮ ಬಾಗೇನಹಳ್ಳಿಗೆ ಬೈಕ್‌ನಲ್ಲಿ ವಾಪಸಾಗುತ್ತಿದ್ದ ವೇಳೆ ರಾಜ್ಯ ಹೆದ್ದಾರಿ 33 ಕುಣಿಗಲ್, ತುಮಕೂರು ರಸ್ತೆ ಬಾಗೇನಹಳ್ಳಿ ಗೇಟ್ ಬಳಿ ಶ್ರೀನಿವಾಸ್ ಹಾಗೂ ಆತನ ಸಹಚರರು ಕಾರಿನಲ್ಲಿ ಬಂದು ಬೈಕ್‌ನ ಹಿಂಬದಿಗೆ ಢಿಕ್ಕಿ ಹೊಡೆದು, ಕೊಲೆ ಮಾಡಿ ಪರಾರಿಯಾಗಿದ್ದರು.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ