Breaking News

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Spread the love

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ ವಿಚಾರಗಳಿರಲಿ ಕೊಲೆ ಹಂತಕ್ಕೆ ಹೋಗುತ್ತವೆ ಅಂದರೆ ಹೇಗೆ ಎಂದು ಪ್ರತಿಕ್ರಿಯಿಸಿದರು.

ಗಂಭೀರವಾಗಿರುವ ಪ್ರಕರಣವನ್ನು ಪ್ರಾರಂಭದಲ್ಲಿ ಪೊಲೀಸರು ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣದಲ್ಲಿ ಕೊನೆವರೆಗೂ ಚುರುಕಾಗಿ ಹಾಗೂ ಕಾನೂನು ಬದ್ಧವಾಗಿ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ