Breaking News

ಮೂಡಲಗಿ | ಶಾಂತಿಯುತ ಬಕ್ರೀದ್‌ ಆಚರಣೆಗೆ ಮನವಿ

Spread the love

ಮೂಡಲಗಿ: ‘ಬಕ್ರೀದ್‌ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಮೂಡಲಗಿಯ ಸಿಪಿಐ ಅಬ್ದುಲ್‌ ವಾಜೀದ್ ಪಟೇಲ್ ಹೇಳಿದರು.

ಮೂಡಲಗಿಯ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಮೂಡಲಗಿಯು ಸಾಮರಸ್ಯಕ್ಕೆ ಹೆಸರಾಗಿದೆ.ಮೂಡಲಗಿ | ಶಾಂತಿಯುತ ಬಕ್ರೀದ್‌ ಆಚರಣೆಗೆ ಮನವಿ

ಅಂಥ ಹೆಸರಿಗೆ ಚ್ಯುತಿಯಾಗದಂತೆ ಇರಬೇಕು. ಕಾನೂನು ಪಾಲನೆ ಮಾಡದಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುಗುವುದು ಎಂದರು.

ಪಿಎಸ್‌ಐ ಚಂದ್ರಶೇಖರ ಹೆರಕಲ್‌ ಮಾತನಾಡಿದರು. ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಲಾಲಸಾಬ್ ಸಿದ್ಧಾಪುರ, ಮಲ್ಲಿಕ ಕಳ್ಳಿಮನಿ ಸಮಾಜದ ಪರವಾಗಿ ಮಾತನಾಡಿದರು. ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ