Breaking News

ಮೂಡಲಗಿ | ಶಾಂತಿಯುತ ಬಕ್ರೀದ್‌ ಆಚರಣೆಗೆ ಮನವಿ

Spread the love

ಮೂಡಲಗಿ: ‘ಬಕ್ರೀದ್‌ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದದಿಂದ ಆಚರಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು’ ಎಂದು ಮೂಡಲಗಿಯ ಸಿಪಿಐ ಅಬ್ದುಲ್‌ ವಾಜೀದ್ ಪಟೇಲ್ ಹೇಳಿದರು.

ಮೂಡಲಗಿಯ ಪೊಲೀಸ್‌ ಠಾಣೆಯಲ್ಲಿ ಬಕ್ರೀದ್‌ ನಿಮಿತ್ತ ಏರ್ಪಡಿಸಿದ್ದ ಶಾಂತಿ ಸಭೆ ಉದ್ಧೇಶಿಸಿ ಮಾತನಾಡಿದ ಅವರು, ಮೂಡಲಗಿಯು ಸಾಮರಸ್ಯಕ್ಕೆ ಹೆಸರಾಗಿದೆ.ಮೂಡಲಗಿ | ಶಾಂತಿಯುತ ಬಕ್ರೀದ್‌ ಆಚರಣೆಗೆ ಮನವಿ

ಅಂಥ ಹೆಸರಿಗೆ ಚ್ಯುತಿಯಾಗದಂತೆ ಇರಬೇಕು. ಕಾನೂನು ಪಾಲನೆ ಮಾಡದಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುಗುವುದು ಎಂದರು.

ಪಿಎಸ್‌ಐ ಚಂದ್ರಶೇಖರ ಹೆರಕಲ್‌ ಮಾತನಾಡಿದರು. ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಲಾಲಸಾಬ್ ಸಿದ್ಧಾಪುರ, ಮಲ್ಲಿಕ ಕಳ್ಳಿಮನಿ ಸಮಾಜದ ಪರವಾಗಿ ಮಾತನಾಡಿದರು. ಸಭೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ