Breaking News

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಖಾಕಿ ಖೆಡ್ಡಕ್ಕೆ ಬಿದ್ದಿರುವ ನಟ ದರ್ಶನ್‌ ಮತ್ತು ತಂಡವು ಕೃತ್ಯ ನಡೆದ ಘಟನೆಯನ್ನು ಎಳೆಎಳೆಯಾಗಿ ಪೊಲೀಸರ ಮುಂದೆ ಬಿಡಿಸಿಟ್ಟಿದೆ.

ಕೊಲೆಯಾಗುತ್ತಾರೆ ಎಂಬ ಕಲ್ಪನೆ ಇರಲಿಲ್ಲ ಎಂದು ಪವಿತ್ರಾ ಹೇಳಿದರೆ, ರೇಣುಕಾ ಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ ಎಂದು ದರ್ಶನ್‌ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ತನಿಖಾಧಿಕಾರಿಗಳು ಹೇಳಿಕೆ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿ ಬಂಧನಕ್ಕೊಳಗಾದವರ ವಿಚಾರಣೆ ನಡೆಯುತ್ತಿದೆ. ಖಾಕಿ ವಶಕ್ಕೆ ಪಡೆದಿರುವ 14 ಮಂದಿಯ ಹೇಳಿಕೆಗಳನ್ನು ಪ್ರತ್ಯೇಕವಾಗಿ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ